Friday 15 August 2014

ಎಸ್.ಎ.ಟಿ ವಿದ್ಯಾಲಯ,ಮಂಜೇಶ್ವರ ಸಂಭ್ರಮದ 68ನೇ ಸ್ವಾತಂತ್ರ್ಯೋತ್ಸವ


ಮಂಜೇಶ್ವರ : ಇಲ್ಲಿನ ಎಸ್..ಟಿ ವಿದ್ಯಾಲಯದಲ್ಲಿ 68ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.ಶಾಲಾ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಶಾಲಾ ಪ್ರಬಂಧಕರಾದ ಶ್ರೀ ದಿನೇಶ್ ಶೆಣೈ.ಎ೦ ಧ್ವಜಾರೋಹಣಗೈದು ಶುಭ ಸಂದೇಶಗಳನ್ನು ನೀಡಿದರು. ವಾರ್ಡ ಸದಸ್ಯರಾದ ಶ್ರೀ ಆನಂದ ಮಾಸ್ತರ್ ಶುಭ ಕೋರಿದರು. ಹೈಸ್ಕೂಲ್ ವಿಭಾಗದ ಪಿ.ಟಿ.ಎ ಉಪಾಧ್ಯಕ್ಷೆ ಶ್ರೀಮತಿ ಹೆಮಲತಾ, ಎಲ್.ಪಿ ವಿಭಾಗದ ಪಿ.ಟಿ.ಎ ಅಧ್ಯಕ್ಷರಾದ ಶ್ರೀ ಪುತ್ತಬ್ಬ ಕುಂಜತ್ತೂರು,ಮದರ್ ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಶಾರದ,ಮುಖ್ಯೋಪಾಧ್ಯಾಯಿನಿಯವರುಗಳಾದ ಶ್ರೀಮತಿ ಮನೋರಮಾ ಕಿಣಿ, ಶ್ರೀಮತಿ ಸುದತಿ.ಬಿ,ಸಲಹಾ ಸಮಿತಿ ಸದಸ್ಯೆ ಶ್ರೀಮತಿ ಲಿಲ್ಲಿ ಬಾಯಿ ಟೀಚರ್ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಂಗವಾಗಿ ನೃತ್ಯ,ಸ್ಥಬ್ದ ಚಿತ್ರ ಪ್ರದರ್ಶನ,ದೇಶ ಭಕ್ತಿಗೀತೆ,ಛದ್ಮವೇಶ,ಸ್ಕೌಟ್-ಗೈಡ್ ದಳದ ಕವಾಯತುಗಳನ್ನು ನಡೆಸಲಾಯಿತು.ಹೆಚ್ಚಿನ ಮಕ್ಕಳು, ಸಿಬ್ಬಂದಿವರ್ಗದವರು,ಮಕ್ಕಳ ರಕ್ಷಕರು , ಶಾಲಾಭಿಮಾನಿಗಳು ಉಪಸ್ಥಿತರಿದ್ದರು. 2013-14ರ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉನ್ನತ ಅಂಕಗಳನ್ನು ಸಂಪಾದಿಸಿದ ಪ್ರತಿಭಾನ್ವಿತರಿಗೆ ನಗದು ಪುರಸ್ಕಾರವನ್ನೂ, ಸ್ಪರ್ಧಾ ವಿಜೇತರಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಶಾಲಾ ಸಮಾಜ ಶಾಸ್ತ್ರದ ಕ್ಲಬ್ಬಿನ ಕನ್ವೀನರ್ ಶ್ರೀಮತಿ ಮೋಹಿನಿ ಟೀಚರ್ ಸ್ವಾಗತಿಸಿದರು.ಹಿರಿಯ ಅಧ್ಯಾಪಕರಾದ ಶ್ರೀ ಪುಂಡಲೀಕ ನಾಯಕ್ ಕಾರ್ಯಕ್ರಮ ನಿರೂಪಿಸಿದರು. ಎಸ್.ಆರ್.ಜಿ ಸಂಚಾಲಕರಾದ ಶ್ರೀ ಕಿರಣ್ ಕುಮಾರ್ ವಂದನಾರ್ಪಣೆಗೈದರು.ತದನಂತರ ಉದಾರ ದಾನಿಯೂ , ಜೋತಿಷ್ಯರಾದ ಶ್ರೀ ಛತ್ರಪತಿ ಪ್ರಭು ಪ್ರತಿ ವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಿದರು.

No comments:

Post a Comment

2022

  ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ  ಬಹಳ ವಿಜೃಂಭಣೆಯಿಂದ ಜರುಗಿತು.