ಇಂದು
ಸ್ಥಳೀಯ ಎಸ್.ಎ.ಟಿ
ಪ್ರೌಢಶಾಲೆಯ 2014
– 2015
ನೇ ಸಾಲಿನ
ಶಾಲಾ ಕಲೋತ್ಸವವು ಶಾಲಾ
ಮುಖ್ಯೋಪಾಧ್ಯಾಯಿನಿ ಶ್ರೀಮತಿ
ಮನೋರಮಾ ಕಿಣಿಯವರ ಔಪಚಾರಿಕ
ಉದ್ಘಾಟನೆಯೊಂದಿಗೆ ವಿದ್ಯುಕ್ತವಾಗಿ
ಆರಂಭವಾಯಿತು.
ಅತಿಥಿಗಳಾಗಿ
ಆಗಮಿಸಿದ ಶ್ರೀಮತಿ ಲಿಲ್ಲಿ ಬಾಯಿ
ಟೀಚರ್ ರವರು ಕಲೋತ್ಸವಕ್ಕೆ ಶುಭ
ಕೋರಿದರು.ಪ್ರೌಢ
ಶಾಲೆಯ ಹಿರಿಯ ಶಿಕ್ಷಕಿ ಶ್ರೀಮತಿ
ಕೃಷ್ಣ ಕುಮಾರಿ ಟೀಚರ್ ರವರು
ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯಲ್ಲಿ
ಪಿ.ಟಿ.ಎ
ಅಧ್ಯಕ್ಷರಾದ ಶ್ರೀ ನಿತಿನ್ ಚಂದ್ರ
ಪೈ,ಎಲ್.ಪಿ
ವಿಭಾಗದ ಮುಖ್ಯೋಪಾಧ್ಯಾಯಿನಿ
ಶ್ರೀಮತಿ ಸುದತಿ ಟೀಚರ್,ಸಿಬ್ಬಂದಿ
ವರ್ಗದ ಕಾರ್ಯದರ್ಶಿ ನಾರಾಯಣ
ಗೋಪಾಲಕೃಷ್ಣ ಹೆಗ್ಗಡೆ
ಉಪಸ್ಥಿತರಿದ್ದರು.ಶಾಲಾ
ಕಲೋತ್ಸವದ ಸಂಚಾಲಕರಾದ ಶ್ರೀ
ವಿರೇಶ್ವರ ಭಟ್ ಸ್ವಾಗತಿಸಿದರೆ,ಕಾರ್ಯದರ್ಶಿ
ನಾರಾಯಣ ಗೋಪಾಲಕೃಷ್ಣ ಹೆಗ್ಗಡೆ
ವಂದಿಸಿದರು.ಇದೇ
ಸಂದರ್ಭದಲ್ಲಿ ಶಾಲಾ ಕ್ರೀಡೋತ್ಸವದ
ವಿಜೇತರಿಗೆ ಬಹುಮಾನ ವಿತರಣೆ
ಮಾಡಲಾಯಿತು.ವಿಜೇತರ
ವಿವರವನ್ನು ದೈಹಿಕ ಶಿಕ್ಷಕರಾದ
ಶ್ಯಾಮ ಕೃಷ್ಣ ಪ್ರಕಾಶ್ ನೀಡಿದರು.
ಆನಂತರ
ವಿವಿಧ ವೇದಿಕೆಗಳಲ್ಲಿ ಕಲೋತ್ಸವದ
ಸ್ಪರ್ಧೆಗಳು ಆರಂಭಗೊಂಡಿತು.ಇನ್ನೂ
ಎರಡು ದಿನಗಳ ಕಾಲ ಕಾರ್ಯಕ್ರಮ
ನಡೆಯಲಿರುವುದು.
Subscribe to:
Post Comments (Atom)
2022
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
ಪರಿಸರ ದಿನಾಚರಣೆಯ ಅಂಗವಾಗಿ ಮಂಜೇಶ್ವರ ಎಸ.ಎ.ಟಿ ಪ್ರೌಢ ಶಾಲೆಯ ಪರಿಸರ ಸಂಘದ ವಿದ್ಯಾರ್ಥಿಗಳು ಮೆರವೆಣಿಗೆಯ ಮೂಲಕ ಪರಿಸರ ಸಂರಕ್ಷಣೆಯ ಕುರಿತಾಗಿ ಜಾಗೃತಿಯನ್ನು...
-
ಮಕ್ಕಳ ಪ್ರವೇಶೋತ್ಸವ ಜೂನ್ .1. ಎಸ್ ಎ ಟಿ ಶಾಲೆಯ 2022-23ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಪ್ರವೇಶೋತ್ಸವ ಬಹಳ ವಿಜೃಂಭಣೆಯಿಂದ ಜರುಗಿತು.
-
School Kalolsavam Result (U.P Section) H.S SECTION RESULT
No comments:
Post a Comment